ಧರ್ಮಸ್ಥಳ: SIT ತನಿಖೆ ಸ್ವಾಗತಾರ್ಹ: ಪ್ರಾಮಾಣಿಕ ತನಿಖೆ ನಡೆದು ಸಾರ್ವಜನಿಕರ ಮುಂದೆ ಸತ್ಯಾಂಶ ಬಹಿರಂಗವಾಗಲಿ- ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ್ ಜೈನ್

ಧರ್ಮಸ್ಥಳ: SIT ತನಿಖೆ ಸ್ವಾಗತಾರ್ಹ: ಪ್ರಾಮಾಣಿಕ ತನಿಖೆ ನಡೆದು ಸಾರ್ವಜನಿಕರ ಮುಂದೆ ಸತ್ಯಾಂಶ ಬಹಿರಂಗವಾಗಲಿ- ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ್ ಜೈನ್

 


ಧರ್ಮಸ್ಥಳ: ಧರ್ಮಸ್ಥಳ  ಪ್ರದೇಶದಲ್ಲಿ ನೂರಾರು ಶವಗಳನ್ನು ಹೂತಿರುವ ಪ್ರಕರಣವನ್ನು ಎಸ್‌ಐಟಿ (SIT) ತನಿಖೆಗೆ ಹಸ್ತಾಂತರಿಸಿದ್ದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ್ ಜೈನ್ ಸ್ವಾಗತಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿದ ಅವರು, ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ‘ಹಲವಾರು ಶವಗಳನ್ನು ಹೂತಿದ್ದೆ’ ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿವೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ ಎಂದಿದ್ದಾರೆ. 

ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ ‘ಸತ್ಯ’. ಆದ್ದರಿಂದ ಈ ಪ್ರಕರಣದಲ್ಲಿ ಎಸ್‌ಐಟಿ ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article