
ಬ್ರಹ್ಮಾವರ: ಪರೀಕ್ಷೆಯಲ್ಲಿ ಅನುತ್ತೀರ್ಣ -ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
18/07/2025 02:58 PM
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಚೇರ್ಕಾಡಿ ಸಮೀಪ ವಿದ್ಯಾರ್ಥಿನಿಯೋರ್ವಳು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಶ್ಮಿತಾ, ಆತ್ಮಹತ್ಯೆಗೆ ಶರಣಾದ ಯುವತಿ.
ಚೇರ್ಕಾಡಿ ಗ್ರಾಮದ ರಾಮ (53) ಎಂಬವರ ಮಗಳು ರಶ್ಮಿತಾ (20) ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಕಲಿಯುತ್ತಿದ್ದವಳು ಪರೀಕ್ಷೆಯಲ್ಲಿ ಫೇಲ್ ಆಗಿ ಸುಮಾರು 6 ತಿಂಗಳಾಗಿತ್ತು.ಈ ಅವಧಿಯಲ್ಲಿ ಕಾಲೇಜಿಗೆ ಹೊಗದೇ ಮನೆಯಲ್ಲಿಯೇ ಇದ್ದು ಕಳೆದ ಎರಡೂವರೆ ತಿಂಗಳಿಂದ ಮಾನಸಿಕ ಖಾಯಿಲೆಗೆ ಚಿಕಿತ್ಸೆ ನಡೆಯುತ್ತಿದ್ದು ಇದೇ ಕಾರಣದಿಂದ ರಶ್ಮಿತಾ ಮಾನಸಿಕವಾಗಿ ನೊಂದು ಮನೆಯ ಕೋಣೆಯ ಫ್ಯಾನ್ಗೆ ಶಾಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.