
ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು!
21/08/2025 05:08 AM
ಉಡುಪಿ : ಪ್ರಕರಣವೊಂದರ ಸಂಬಂಧ ಸೌಜನ್ಯ ಹೋರಾಟಗಾರ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬ್ರಹ್ಮಾವರ ಠಾಣೆಯಲ್ಲಿ ನಿನ್ನಯಷ್ಟೇ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದ್ವೇಷ ಭಾಷಣದ ಪ್ರಕರಣ ದಾಖಲಾಗಿತ್ತು. ಬಿಜೆಪಿ ಬಿ ಎಲ್ ಸಂತೋಷ್ ವಿರುದ್ಧ ತಿಮರೋಡಿ ಮಾತನಾಡಿದ್ದು ಸಾಕಷ್ಟು ವೈರಲ್ ಆಗಿತ್ತು. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಇದೀಗ ಬ್ರಹ್ಮಾವರ ಪೊಲೀಸರು ತಿಮರೋಡಿಯನ್ನು ಬಂಧಿಸಿ ಕರೆತರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.