ಉಡುಪಿ:ಸೆ. 5 ಕ್ಕೆ ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ- ಉಡುಪಿಯಲ್ಲಿ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳ ಪೂರ್ವಭಾವಿ ಸಭೆ

ಉಡುಪಿ:ಸೆ. 5 ಕ್ಕೆ ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ- ಉಡುಪಿಯಲ್ಲಿ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳ ಪೂರ್ವಭಾವಿ ಸಭೆ

 


ಉಡುಪಿ: ಧರ್ಮಸ್ಥಳದಲ್ಲಿ  ನಡೆಯುತ್ತಿರುವ ಘಟನೆಗಳ ಬಗ್ಗೆ ಸೆಪ್ಟೆಂಬರ್ 5 ರಂದು ಧರ್ಮಸ್ಥಳದಲ್ಲಿ ಆಯೋಜನೆಗೊಂಡಿರುವ ಬೃಹತ್ ಸಮಾವೇಶದ ಬಗ್ಗೆ ಸಮಾಲೋಚನಾ ಸಭೆ ಉಡುಪಿಯಲ್ಲಿ ನಡೆಯಿತು. ಆಳ್ವಾಸ್ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕ್ಷೇತ್ರಗಳ ಮುಖಂಡರ ಉಪಸ್ಥಿತಿಯಲ್ಲಿ ಈ ಸಭೆ ನಡೆಯಿತು. ಉಡುಪಿಯ ಶಾಸಕ ಯಶಪಾಲ್ ಸುವರ್ಣ, ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಸಹಿತ ಹಲವು ಜನಪ್ರತಿನಿಧಿಗಳು ,ಧಾರ್ಮಿಕ ಮುಖಂಡರು  ಹಾಜರಿದ್ದರು. ಸಭೆಯಲ್ಲಿ ಕೃಷ್ಣಮಠದ ವತಿಯಿಂದ ಮಠದ ದಿವಾನ ನಾಗರಾಜ ಆಚಾರ್ಯ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

Ads on article

Advertise in articles 1

advertising articles 2

Advertise under the article