
ಉಡುಪಿ: ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ ನವಜೀವನ ಲೇ ಕೌನ್ಸಿಲರ್ ನ 6ನೇ ತರಬೇತಿ ಕಾರ್ಯಾಗಾರದ ಸಮಾರೋಪ
ಉಡುಪಿ: ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆ, ಕಮಲ್ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ ಮತ್ತು ಒನ್ ಗುಡ್ ಸ್ಟೆಪ್ ಇದರ ಜಂಟಿ ಆಶ್ರಯದಲ್ಲಿ ನವಜೀವನ ಲೇ ಕೌನ್ಸಿಲರ್ ನ 6ನೇ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಡಾ .ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್ ಎ ಬಾಳಿಗಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಆರ್ ವಿ ಬಾಳಿಗಾ, ಟ್ರಸ್ಟಿ,ಡಾ ಎ ವಿ ಬಾಳಿಗ ಚಾರಿಟೀಸ್ ಮತ್ತು ಕಮಲ್ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಘವೇಂದ್ರ ರಾವ್ ನಿವೃತ್ತ ಬ್ಯಾಂಕ್ ಅಧಿಕಾರಿ , ಲೇ ಪರ್ಸನ್ ಕೌನ್ಸಿಲರ್ ಆಗಮಿಸಿದ್ದರು. ವೇದಿಕೆಯಲ್ಲಿ ಆಸ್ಪತ್ರೆಯ ಮನೋ ವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ, ಡಾ ಮಾನಸ್ ಇ ಆರ್ ಇವರು ಉಪಸ್ಥಿತದ್ದರು. ನವಜೀವನ ಲೇ ಕೌನ್ಸಿಲರ್ ನ ತರಬೇತಿ ಕಾರ್ಯಾಗಾರದ ಕೋರ್ಡಿನೇಟರ್ ಮತ್ತು ಆಸ್ಪತ್ರೆಯ ಆಡಳಿತ ಅಧಿಕಾರಿಯಾಗಿರುವ ಶ್ರೀಮತಿ ಸೌಜನ್ಯ ಶೆಟ್ಟಿ ಆಗಮಿಸಿದ ಸರ್ವರನ್ನು ಸ್ವಾಗತಿಸಿದರು. ಆಸ್ಪತ್ರೆಯ ಭದ್ರತಾ ಸಿಬ್ಬಂದಿಯಾದ ಭಾಗ್ಯಶ್ರೀ ಇವರು ಕಾರ್ಯಕ್ರಮಕ್ಕೆ ಪ್ರಾರ್ಥಿಸಿದರು.ಶ್ರೀಮತಿ ದೀಪಶ್ರೀ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ನವಜೀವನ ಲೇ ಕೌನ್ಸಿಲರ್ ನ 7ನೇ ಬ್ಯಾಚಿನ ತರಬೇತಿ ಕಾರ್ಯಗಾರವು ಅಕ್ಟೋಬರ್ ತಿಂಗಳಲ್ಲಿ ಆರಂಭಗೊಳ್ಳಲಿದೆ.