ಉಡುಪಿ: ಸಾಹಿತಿ ಮರವಂತೆ ಪ್ರಕಾಶ್ ಪಡಿಯಾರ್ ಹೊಸಬೆಳಕು ಆಶ್ರಮದಲ್ಲಿ ನಿಧನ !

ಉಡುಪಿ: ಸಾಹಿತಿ ಮರವಂತೆ ಪ್ರಕಾಶ್ ಪಡಿಯಾರ್ ಹೊಸಬೆಳಕು ಆಶ್ರಮದಲ್ಲಿ ನಿಧನ !

 

ಉಡುಪಿ ಸಾಹಿತಿ, ಪತ್ರಕರ್ತ, ಅಂಕಣ ಬರಹಗಾರ ಮರವಂತೆ ಪ್ರಕಾಶ್ ಪಡಿಯಾರ್ (64) ಆ.5, ಮಂಗಳವಾರ, ಆಶ್ರಯ ಪಡೆದಿರುವ ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸಾಹಿತ್ಯ,‌ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಪಡಿಯಾರರು, ಗ್ರಾಮೀಣ ಭಾಗದ ಸಮಸ್ಯೆಯ ಕುರಿತು ಬರೆದ ವರದಿಗಳು, ಆಡಳಿತ ವ್ಯವಸ್ಥೆಯ ಗಮನ ಸೆಳೆದು ಫಲಶ್ರುತಿ ಪಡೆಯುತ್ತಿದ್ದವು. ಅವರ ಅನನ್ಯ ಸಾಧನೆಗೆ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿದ್ದವು. ಕೆಲವು ವರ್ಷ ಜೀವಾ ವಿಮೆ ಎಜೆಂಟರಾಗಿದ್ದರು. ಮಾಧ್ಯಮಗಳಿಗೆ ಜಾಹೀರಾತು ಸಂಗ್ರಹಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಅನಾರೋಗ್ಯ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದ‌ ಪಡಿಯಾರರು, ಜೀವನ ನಿರ್ವಹಣೆ ಎದುರಿಸಲು ಅಸಹಾಯಕರಾಗಿ ಉಡುಪಿಯಲ್ಲಿ ದಿನಗಳನ್ನು ಕಳೆಯುತ್ತಿದ್ದರು. ಕಳೆದ ವರ್ಷದ ಮೇ 18‌ ರಂದು, ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು  ತಾರಾನಾಥ್ ಮೇಸ್ತ ಶಿರೂರು ಅವರನ್ನು ರಕ್ಷಿಸಿ ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ಪುರ್ನವಸತಿ ಕಲ್ಪಿಸಿದ್ದರು.‌ ಆಶ್ರಮದ ಸಂಚಾಲಕಿ ತನುಲಾ ತರುಣ್ ಅವರು ಆಹಾರ, ಔಷಧೋಪಚಾರ ಒದಗಿಸಿ ಅಕ್ಕರೆಯಿಂದ ಪೋಷಿಸಿದ್ದರು.

Ads on article

Advertise in articles 1

advertising articles 2

Advertise under the article