
ಉಡುಪಿ: ಸೆ. 30 ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೃಷ್ಣಮಠಕ್ಕೆ
29/08/2025 10:44 AM
ಉಡುಪಿ: ಉಪ ಮುಖ್ಯಮಂತ್ರಿ ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೆ. 30 ರಂದು ( ಶನಿವಾರ ) ಉಡುಪಿಗೆ ಆಗಮಿಸಲಿದ್ದಾರೆ. ಕೃಷ್ಣಮಠಕ್ಕೆ ಆಗಮಿಸುವ ಅವರು, ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣಮಠದ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರ 64 ರ ಜನ್ಮನಕ್ಷತ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 .15ಕ್ಕೆ ಶ್ರೀಕ್ರಷ್ಣನ ಸನ್ನಿಧಾನಕ್ಕೆ ಆಗಮಿಸಿ ಸಮಾರಂಭದಲ್ಲಿ ಭಾಗವಹಿಸಿದ ನಂತರ ರಾತ್ರಿ 8 ಗಂಟೆಗೆ ಉಡುಪಿಯಿಂದ ರಸ್ತೆಯ ಮೂಲಕ ಮಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.