ಉಡುಪಿ: ಹೆದ್ದಾರಿ ಹೊಂಡ ಮುಚ್ಚಿ ಸಂಚಾರ ಸುಗಮಗೊಳಿಸಿದ ಟ್ರಾಫಿಕ್ ಪೊಲೀಸರಿಗೆ ಕರವೇ ವತಿಯಿಂದ ಗೌರವಾರ್ಪಣೆ

ಉಡುಪಿ: ಹೆದ್ದಾರಿ ಹೊಂಡ ಮುಚ್ಚಿ ಸಂಚಾರ ಸುಗಮಗೊಳಿಸಿದ ಟ್ರಾಫಿಕ್ ಪೊಲೀಸರಿಗೆ ಕರವೇ ವತಿಯಿಂದ ಗೌರವಾರ್ಪಣೆ

 


ಉಡುಪಿ: ಅಂಬಲಪಾಡಿ ಬಳಿ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲಕ್ಕೆ ಹೊಂಡಗುಂಡಿಗಳು ಬಿದ್ದು ವಾಹನ ಸಂಚಾರವೇ ಕಷ್ಟಕರವಾಗಿದೆ. ಅಂಬಲಪಾಡಿ ಕಾರ್ತಿಕ್ ಹೋಟೆಲ್ ಬಳಿ ದೊಡ್ಡ ಪ್ರಮಾಣದಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು ದ್ವಿಚಕ್ರ ವಾಹನ ಸವಾರರು ಸ್ವಲ್ಪ ಎಡವಿದರೂ ಬೀಳೋದು ಗ್ಯಾರಂಟಿ. ಹಲವರು ಇಲ್ಲಿ ಬಿದ್ದು ಗಾಯ ಮಾಡಿಕೊಂಡದ್ದೂ ಇದೆ. ಇನ್ನು ದೊಡ್ಡ ವಾಹನಗಳು ಹೊಂಡದಲ್ಲಿ ಸಿಕ್ಕಿಬಿದ್ದು ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಆಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ. 

ಆದರೆ ಸಾರ್ವಜನಿಕರ ಹಾಗೂ ವಾಹನ ಸವಾರರ ಸಮಸ್ಯೆಗಳಿಗೆ ಮರುಗಿದ ಟ್ರಾಫಿಕ್ ಪೊಲೀಸರು ಮಣ್ಣು ಹಾಕಿ ಮುಚ್ಚುವ ಕೆಲಸ ಮಾಡಿದ್ದಾರೆ. ಟ್ರಾಫಿಕ್ ಪಿಎಸ್ ಐ ಪ್ರಕಾಶ್ ಮತ್ತು ಸಿಬ್ಬಂದಿಯ ಈ ಕಾರ್ಯಕ್ಕೆ  ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಟ್ರಾಫಿಕ್ ಪೊಲೀಸರ ಸಮಾಜಮುಖಿ ಕಾರ್ಯವೈಖರಿಗೆ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಗೌರವಾರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಕರವೇ ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್, ಸಯ್ಯದ್ ನಿಜಾಮ್, ಸತೀಶ್ ಸನಿಲ್, ಪ್ರಶಾಂತ್ ಸಾಲಿಯಾನ್, ಅಬ್ದುಲ್ ಖಾದರ್ ಶಿರ್ವ, ಕಲಂಧರ್ ಶಫಿ, ಹಮೀದ್, ಜ್ಯೋತಿ ಸೇರಿಗಾರ್ತಿ, ದೇವಕಿ ಬಾರ್ಕೂರ್, ಕಿರಣ್ ಪ್ರತಾಪ್, ಚಂದ್ರಕಲಾ, ಮೋಹಿನಿ, ಸವಿತಾ  ಮೊದಲಾದವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article