ಕಾಪು: ಹಿಟ್ ಅಂಡ್ ರನ್ - ಸಂತೆಕಟ್ಟೆಯ ಯುವಕ ದಾರುಣ ಸಾವು-

ಕಾಪು: ಹಿಟ್ ಅಂಡ್ ರನ್ - ಸಂತೆಕಟ್ಟೆಯ ಯುವಕ ದಾರುಣ ಸಾವು-

 


ಉಡುಪಿ: ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಹಿಟ್ & ರನ್ ನಡೆದಿದ್ದು ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಅನೂಶ್ ಭಂಡಾರಿ ( 21) ಸ್ಥಳದಲ್ಲೇ ಸಾವನ್ನಪ್ಪಿದ ಯುವಕ.

ಕಳೆದ ತಡರಾತ್ರಿ ಈ ಘಟನೆ ನಡೆದಿದೆ. ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಅನುಷ್ ಭಂಡಾರಿ ,ಸೋಮವಾರ ರಾತ್ರಿ ಸ್ಕೂಟಿಯಲ್ಲಿ ಬರುತ್ತಿದ್ದಾಗ  ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣವಾದ ವಾಹನ ಸ್ಥಳದಿಂದ  ಪರಾರಿಯಾಗಿದೆ.ಅಪಘಾತದ ನಂತರ ಬೇರೆ ವಾಹನಗಳು ದೇಹದ ಮೇಲೆ ಹರಿದಿರುವ ಸಾಧ್ಯತೆ ಇದ್ದು ಮೃತದೇಹ ಸಂಪೂರ್ಣ ನಜ್ಜು ಗುಜ್ಜಾದ ಸ್ಥಿತಿಯಲ್ಲಿದೆ .ಕಾಪು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಅನೂಶ್ ಆರು ತಿಂಗಳ ಹಿಂದೆ ಉಡುಪಿಗೆ ಬಂದಿದ್ದರು.ಇವರು ಉಡುಪಿಯ ಸಂತೆಕಟ್ಟೆ ನಿವಾಸಿಯಾಗಿದ್ದಾರೆ.

ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಇರಿಸಲಾಗಿದೆ.

Ads on article

Advertise in articles 1

advertising articles 2

Advertise under the article