
ಕೊಲ್ಲೂರು:ಕಾಂತಾರ ಟ್ರೈಲರ್ ಬಿಡುಗಡೆ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಡಿವೈನ್ ಸ್ಟಾರ್ ರಿಷಭ್
24/09/2025 05:34 AM
ಕೊಲ್ಲೂರು: ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆಯಾಗಿದ್ದು ಭಾರೀ ಸದ್ದು ಮಾಡುತ್ತಿದೆ.ಇದರ ಬೆನ್ನಲ್ಲೇ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕೆಯ ದರ್ಶನ ಕೈಗೊಂಡರು. ರಿಷಬ್ ಶೆಟ್ಟಿ ಪತ್ನಿ ಸಹಿತ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ರಿಷಭ್ ದಂಪತಿ ಸಿನಿಮಾದ ಯಶಸ್ವಿಗಾಗಿ ಪ್ರಾರ್ಥನೆ ಸಲ್ಲಿಸಿದರು.ತಮ್ಮ ಪ್ರತೀ ಸಿನೆಮಾ ಬಿಡುಗಡೆಗೂ ಮುನ್ನ ರಿಷಭ್ ,ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ.ಅದರಂತೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ಅವರನ್ನು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವ ಸಲ್ಲಿಸಲಾಯಿತು.