ಮಟ್ಟು ಬೀಚ್ ನಲ್ಲಿ ಈಜಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು

ಮಟ್ಟು ಬೀಚ್ ನಲ್ಲಿ ಈಜಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು



ಮಟ್ಟು ಬೀಚ್ ನಲ್ಲಿ ಈಜಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು

ಸಮುದ್ರಕ್ಕಿಳಿದು ಈಜಾಡುತ್ತಿದ್ದ ಮಣಿಪಾಲದ ಕಾಲೇಜೊಂದರ ಆರು ಮಂದಿ ವಿದ್ಯಾರ್ಥಿಗಳು

ಉಡುಪಿ: ಸಮುದ್ರಕ್ಕಿಳಿದು ಈಜಾಡುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ‌ ಮುಳುಗಿ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಮಟ್ಟು ಬೀಚ್ ನಲ್ಲಿ ಶನಿವಾರ ಸಂಭವಿಸಿದೆ. 

ಮೃತನನ್ನು ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ ಮಧ್ಯಪ್ರದೇಶ ಮೂಲದ ವೀರೂರುಲ್ಕರ್ ( 18) ಎಂದು ಗುರುತಿಸಲಾಗಿದೆ. ಮಣಿಪಾಲದಿಂದ ಮಟ್ಟು ಬೀಚ್ ಗೆ ತೆರಳಿದ್ದ ಆರು ಮಂದಿ ವಿದ್ಯಾರ್ಥಿಗಳು ಸಮುದ್ರಕ್ಕಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಈ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದರು. ಬಳಿಕ ವಿದ್ಯಾರ್ಥಿಗಳು ಅಲ್ಲಿಂದ ಬೇರೊಂದು ಸಮುದ್ರ ದಡಕ್ಕೆ ತೆರಳಿ ಅಲ್ಲಿ ಈಜಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸ್ಥಳೀಯರಾದ ಆರ್ಯನ್, ಪ್ರವೀಣ್ ಮತ್ತಿತರರು ರಕ್ಷಣಾ ಕಾರ್ಯ ನಡೆಸಿದ್ದರು. ಕಾಪು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article