ಉಡುಪಿ-ಉಚ್ಚಿಲ ದಸರಾ ಶೋಭಾಯಾತ್ರೆ: ಅ.2ರಂದು‌ ಸಂಚಾರ ಮಾರ್ಗ ಬದಲಾವಣೆ

ಉಡುಪಿ-ಉಚ್ಚಿಲ ದಸರಾ ಶೋಭಾಯಾತ್ರೆ: ಅ.2ರಂದು‌ ಸಂಚಾರ ಮಾರ್ಗ ಬದಲಾವಣೆ

 


ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2025 ಪ್ರಯುಕ್ತ ಅ.2ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಸಂಚಾರ ತಡೆಯಾಗದಂತೆ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಠಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.

ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.

ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು.

ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9:00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್‌ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸುವುದು.

ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿ ಯಿಂದ ಸಂಚರಿಸುವುದು.

ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಗಂಟೆಯವರೆಗೆ ನಿರ್ಬಂಧಿಸಲಾಗಿದೆ.

ಈ ನಿಷೇಧವು ವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ.

Ads on article

Advertise in articles 1

advertising articles 2

Advertise under the article