
ಅಜೆಕಾರು: ಮಾರಕಾಸ್ತ್ರ ತೋರಿಸಿ ಹಟ್ಟಿಯಿಂದ ದನಕಳ್ಳತನ
29/09/2025 04:13 PM
ಕಾರ್ಕಳ: ಮನೆಯವರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿ ಮೂರು ದನಗಳನ್ನು ಕಳ್ಳತನ ಮಾಡಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ ರವಿವಾರ (ಸೆ.28) ತಡರಾತ್ರಿ ನಡೆದಿದೆ.
ಶಿರ್ಲಾಲಿನ ಜಯಶ್ರೀ ಎಂಬ ಮಹಿಳೆಯ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಹಟ್ಟಿಗೆ ನುಗ್ಗಿದ ದುಷ್ಕರ್ಮಿಗಳು ಮೂರು ದನಗಳನ್ನು ಕದ್ದೊಯ್ದಿದ್ದಾರೆ.ರಾತ್ರಿ ಮಹಿಳೆಯು ಮನೆಯಲ್ಲಿ ಒಂಟಿಯಾಗಿದ್ದಾಗ ವಾಹನವೊಂದರಲ್ಲಿ ಕಳ್ಳರು ಬಂದಿದ್ದು, ಈ ವೇಳೆ ಶಬ್ದಕ್ಕೆ ಎಚ್ಚೆತ್ತ ಮಹಿಳೆ ಹೊರಗೆ ಬಂದಾಗ ಮಾರಕಾಸ್ತ್ರಗಳನ್ನು ತೋರಿಸಿ ಆಕೆಯನ್ನು ಬೆದರಿಸಿ ದನಗಳನ್ನು ಕೊಂಡೊಯ್ದಿದ್ದಾರೆ. ಈ ಬಗ್ಗೆ
ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.