
ಉಡುಪಿ: ನೂತನ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ ಪಾಲ್ ಸುವರ್ಣ ಅಭಿನಂದನೆ
10/09/2025 08:41 AM
ಉಡುಪಿ: ಭಾರತ ದೇಶದ 15ನೇ ಉಪರಾಷ್ಟ್ರಪತಿಗಳಾಗಿ ಆಯ್ಕೆಯಾದ ಸಿ. ಪಿ. ರಾಧಾಕೃಷ್ಣನ್ ರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಯವರೊಂದಿಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ. ಎನ್. ಶಂಕರ ಪೂಜಾರಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.