ಮೈಸೂರು ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್ -  ಚಾಮುಂಡಿ ದೇವಿಗೆ ಪುಷ್ಪಾರ್ಚನೆ

ಮೈಸೂರು ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್ - ಚಾಮುಂಡಿ ದೇವಿಗೆ ಪುಷ್ಪಾರ್ಚನೆ

 


ಮೈಸೂರು: ನಾಡ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ದೇವಿಗೆ ಹಿರಿಯ ಸಾಹಿತಿ, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಚಾಲನೆ ನೀಡಿದ್ದಾರೆ. ಇಂದು ಬೆಳಿಗ್ಗೆ 10.10 ರಿಂದ 10.40 ರ ನಡುವೆ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ದೇವಾಲಯದ ಹೊರಗೆ ಸ್ಥಾಪಿಸಲಾದ ವೇದಿಕೆಯಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ ಮುನ್ನುಡಿ ಬರೆದರು.





ಅವರ ಜೊತೆ ಸಿಎಂ ಸಿದ್ದರಾಮಯ್ಯ, ಸಚಿವ ಹೆಚ್ ಸಿ ಮಹದೇವಪ್ಪ, ಶಿವರಾಜ್ ತಂಗಡಗಿ, ಮೈಸೂರು ಜಿಲ್ಲಾಧಿಕಾರಿಗಳು, ಶಾಸಕರು ಹಾಜರಿದ್ದರು.



ಮೈಸೂರು ಅರಮನೆ ನಗರಿ ಸಿಂಗಾರಗೊಂಡಿದ್ದು, ವಾರ್ಷಿಕ ದಸರಾ ಆಚರಣೆಯ ಉದ್ಘಾಟನೆಗೊಂಡಿದೆ. 10 ದಿನಗಳ ಈ ಉತ್ಸವದಲ್ಲಿ,  ನವರಾತ್ರಿ ಹಬ್ಬದ ಸಂಪ್ರದಾಯವನ್ನು ಮುಂದುವರಿಸಲು ನಗರವು ಹಲವಾರು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆತಿಥ್ಯ ವಹಿಸಲಿದೆ.



‘ನಾಡ ಹಬ್ಬ’ (ರಾಜ್ಯ ಉತ್ಸವ) ಎಂದು ಆಚರಿಸಲಾಗುವ ಈ ಉತ್ಸವವು ಈ ವರ್ಷ ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಬಿಂಬಿಸುವ ಅದ್ಧೂರಿ ಸಮಾರಂಭವಾಗಲಿದೆ ಮತ್ತು ರಾಜಮನೆತನದ ವೈಭವವನ್ನು ನೆನಪಿಸುತ್ತದೆ.



ಈ ವರ್ಷದ ಮೈಸೂರು ದಸರಾ ಉದ್ಘಾಟನೆಗೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ಸರ್ಕಾರದ ನಿರ್ಧಾರದ ಬಗ್ಗೆ ವಿವಾದ ಭುಗಿಲೆದ್ದಿತ್ತು.

Ads on article

Advertise in articles 1

advertising articles 2

Advertise under the article