
ಕುಂದಾಪುರ: ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರು ನೀರುಪಾಲು; ಇಬ್ಬರು ಸಾವು ,ಓರ್ವನ ರಕ್ಷಣೆ
07/09/2025 11:37 AM
ಕುಂದಾಪುರ: ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರ ಪೈಕಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾಗಿ, ಇನ್ನೋರ್ವನನ್ನು ರಕ್ಷಿಸಿದ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಬೆಂಗಳೂರಿಂದ ಬಂದಿದ್ದ 10 ಮಂದಿ ಯುವಕರ ತಂಡವು ಕುಂಬಾಶಿಯ ಗಾಯಿತ್ರಿ ಕಂಪರ್ಟ್ ನಲ್ಲಿ ತಂಗಿದ್ದು ಇಂದು ಮಧ್ಯಾಹ್ನ 9 ಮಂದಿ ಯುವಕರು ಸಮುದ್ರ ಸ್ನಾನ ಮಾಡಲೆಂದು ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಇಳಿದ್ದಿದ್ದಾರೆ.ಸಮುದ್ರದ ಅಬ್ಬರದ ಅಲೆಗೆ ನಾಲ್ವರು ಕೊಚ್ಚಿ ಹೋಗಿದ್ದು ಓರ್ವನನ್ನು ತಕ್ಷಣ ಸ್ಥಳೀಯರು ಹಾಗೂ ಜೊತೆಗೆ ಇದ್ದ ಯುವಕರು ಸೇರಿ ಎತ್ತಿ ಮೇಲಕ್ಕೆ ತಂದಿದ್ದಾರೆ. ಆದರೆ ಆತ ಗಂಭೀರಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು.
ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಜೀವನ್ ಮಿತ್ರ ನಾಗರಾಜ್ ಪುತ್ರನ್ ರವರು ಸ್ಥಳೀಯರ ಸಹಕಾರದಿಂದ ಇಬ್ಬರ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವ ನಾಪತ್ತೆ ಆಗಿದ್ದಾನೆ. ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.