
ಕಾರ್ಕಳ: ರಿಕ್ಷಾ ಚಲಾಯಿಸುತ್ತಿರುವಾಗಲೇ ಹೃದಯಾಘಾತ- ಚಾಲಕ ಸಾವು
05/10/2025 04:35 AM
ಕಾರ್ಕಳ: ರಿಕ್ಷಾ ಚಲಾಯಿಸುತ್ತಿದ್ದ ಚಾಲಕರೊಬ್ಬರು ಎದೆನೋವಿನಿಂದ ಮೃತಪಟ್ಟ ಘಟನೆ ಕಾರ್ಕಳ ಟಿಎಂಎ ಪೈ ಆಸ್ಪತ್ರೆಯ ಎದುರುಗಡೆ ಸಂಭವಿಸಿದೆ.
ಮೃತರನ್ನು ಕಾರ್ಕಳ ತೆಳ್ಳಾರ್ ರಸ್ತೆಯ ನಿವಾಸಿ ಪ್ರಕಾಶ್ಚಂದ್ರ(55) ಎಂದು ಗುರುತಿಸಲಾಗಿದೆ. ಇವರು ಅತ್ತೂರಿನಿಂದ ಕ್ರಿಯೇಟಿವ್ ಕಾಲೇಜಿನ ಕಡೆಗೆ ಬಾಡಿಗೆಗೆ ಹೋಗುತ್ತಿದ್ದು ಈ ವೇಳೆ ಎದೆನೋವು ಕಾಣಿಸಿಕೊಂಡಿತ್ತೆನ್ನಲಾ ಗಿದೆ. ಕೂಡಲೇ ಇವರು ತಾನು ಚಲಾಯಿಸುತ್ತಿದ್ದ ರಿಕ್ಷಾವನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿ ಕುಸಿದು ಬಿದ್ದು ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.