ಹೊಸದಿಲ್ಲಿ: " ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನಾನು ತಪ್ಪು ಮಾಡಿಲ್ಲ " ಶೂ ಎಸೆದ ವಕೀಲನ ಪ್ರತಿಕ್ರಿಯೆ

ಹೊಸದಿಲ್ಲಿ: " ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನಾನು ತಪ್ಪು ಮಾಡಿಲ್ಲ " ಶೂ ಎಸೆದ ವಕೀಲನ ಪ್ರತಿಕ್ರಿಯೆ

 


ಹೊಸದಿಲ್ಲಿ: ನ್ಯಾಯಾಲಯದ ಸಭಾಂಗಣದಲ್ಲಿ ಸೋಮವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ರಾಕೇಶ್ ಕಿಶೋರ್ ಶೂ ಎಸೆಯಲು ಯತ್ನಿಸಿದ್ದರು. ಘಟನೆ ಸಂಬಂಧ ಸುದ್ದಿಸಂಸ್ಥೆ 'ಎಎನ್‌ಐ'ಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದು, 'ನಾನು ಹೆದರುವುದಿಲ್ಲ. ಘಟನೆ ಬಗ್ಗೆ ವಿಷಾದವನ್ನು ವ್ಯಕ್ತಪಡಿಸುವುದಿಲ್ಲ' ಎಂದಿದ್ದಾರೆ.

'ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಹಲವು ಆದೇಶಗಳನ್ನು ನೀಡಿದೆ. ಸನಾತನ ಧರ್ಮ ಕುರಿತಾದ ಸಿಜೆಐ ಅವರ ಹೇಳಿಕೆಯಿಂದ ನನಗೆ ಬೇಸರವಾಗಿತ್ತು. ನ್ಯಾಯಾಧೀಶರು ಅರ್ಜಿದಾರರಿಗೆ ಪರಿಹಾರ ಒದಗಿಸದಿದ್ದರೂ ಪರವಾಗಿಲ್ಲ. ಆದರೆ, ಅಪಹಾಸ್ಯ ಮಾಡಬಾರದು. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ಸಂದರ್ಭದಲ್ಲಿ ನಾನು ಮದ್ಯಪಾನ ಮಾಡಿರಲಿಲ್ಲ' ಎಂದೂ ಹೇಳಿದ್ದಾರೆ.

ಯುನೆಸ್ಕೋದ ವಿಶ್ವ ಪಾರಂಪರಿಕ ಪಟ್ಟಿಯಲ್ಲಿರುವ ಮಧ್ಯ ಪ್ರದೇಶದ ಖಜುರಾಹೋದ ಜಾವರಿ ದೇವಾಲಯದಲ್ಲಿನ 7 ಅಡಿ ಎತ್ತರ ವಿಷ್ಣು ಮೂರ್ತಿಯ ತಲೆಯ ಭಾಗವು ನಾಶವಾಗಿತ್ತು. ಈ ಮೂರ್ತಿಯನ್ನು ಮರುನಿರ್ಮಿಸಿ, ದೇವಾಲಯದಲ್ಲಿ ಮರುಸ್ಥಾಪಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಅವರು, 'ಇದೊಂದು ಪ್ರಚಾರ ಹಿತಾಸಕ್ತಿ ಮೊಕದ್ದಮೆ... ಏನಾದರೂ ಮಾಡುವಂತೆ ಹೋಗಿ, ನಿಮ್ಮ ದೇವರಲ್ಲಿಯೇ ಕೇಳಿಕೊಳ್ಳಿ. ನೀವು ವಿಷ್ಣುವಿನ ಪರಮ ಭಕ್ತ ಎಂದು ಹೇಳಿಕೊಂಡಿದ್ದೀರಿ. ಆದ್ದರಿಂದ ನೀವೇ ಹೋಗಿ ದೇವರಲ್ಲಿ ಪ್ರಾರ್ಥಿಸಿ. ಇದು ಪುರಾತತ್ವ ಇಲಾಖೆಗೆ ಸೇರಿದ ಜಾಗ. ಇದಕ್ಕೆ ಇಲಾಖೆ ಅನುಮತಿ ನೀಡಬೇಕು' ಎಂದು ಹೇಳಿದ್ದರು.

ಗವಾಯಿ ಅವರ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿ, ವಿವಾದದ ಸ್ವರೂಪವನ್ನು ಪಡೆದುಕೊಂಡಿತ್ತು. ಜಾಲತಾಣಗಳ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ್ದ ಗವಾಯಿ ಅವರು, 'ನಾನು ಎಲ್ಲ ಧರ್ಮಗಳನ್ನೂ ಗೌರವಿಸುತ್ತೇನೆ. ಇವೆಲ್ಲವೂ ಸಾಮಾಜಿಕ ಜಾಲತಾಣಗಳ ಸೃಷ್ಟಿ' ಎಂದಿದ್ದರು. ನ್ಯಾಯಾಲಯದಲ್ಲಿ ಪಿಐಎಲ್ ಸಲ್ಲಿಸಲಾಯಿತು. " ಸಿಜೆಐ ಅದನ್ನು ಅಪಹಾಸ್ಯ ಮಾಡಿ ಹೇಳಿದರು - ಹೋಗಿ ವಿಗ್ರಹವನ್ನು ಪ್ರಾರ್ಥಿಸಿ ಮತ್ತು ಅದರ ಸ್ವಂತ ತಲೆಯನ್ನು ಪುನಃಸ್ಥಾಪಿಸಲು ಹೇಳಿ... ನಮ್ಮ ಸನಾತನ ಧರ್ಮಕ್ಕೆ ಸಂಬಂಧಿಸಿದ ವಿಷಯ ಬಂದಾಗ, ಸುಪ್ರೀಂ ಕೋರ್ಟ್‌ ಅಂತಹ ಆದೇಶಗಳನ್ನು ನೀಡುತ್ತದೆ. ಅರ್ಜಿದಾರರಿಗೆ ಪರಿಹಾರ ನೀಡಬೇಡಿ, ಆದರೆ ಅವರನ್ನು ಅಪಹಾಸ್ಯ ಮಾಡಬೇಡಿ... ನನಗೆ ನೋವಾಯಿತು... ನಾನು ಕುಡಿದಿರಲಿಲ್ಲ; ಇದು ಅವರ ಕ್ರಮಕ್ಕೆ ನನ್ನ ಪ್ರತಿಕ್ರಿಯೆ..." ಎಂದು  ಶೂ ಎಸೆದ ವಕೀಲ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article