ತಾಯಿ ಮೇಲೆ ಮಗಳ ದೌರ್ಜನ್ಯ- ಸಾಮಾಜಿಕ ಚಿಂತಕಿ ರಮಿತಾ ಸೂರ್ಯವಂಶಿ ಅವರಿಂದ ಕಾವೂರು ಠಾಣೆಯಲ್ಲಿ ದೂರು ದಾಖಲು



ಕಾವೂರು : ಸಾಮಾಜಿಕ ಜಾಲತಣಗಳಲ್ಲಿ ಮೂಡುಶೆಡ್ಡೆ ಪಂಚಾಯತ್ ಎದುರು ತಾಯಿ ಮೇಲೆ ಮಗಳು ದೌರ್ಜನ್ಯ ಎಸಗಿರುವ ಸುದ್ದಿ ವೈರಲ್ ಆಗಿದೆ.  ಇದರ ಬಗ್ಗೆ ಕಾವೂರು ಠಾಣೆಯಲ್ಲಿ ವಿಚಾರಿಸಿದಾಗ ಯಾವುದೇ ದೂರು ದಾಖಲಾಗಲಿಲ್ಲ ಎಂಬ ಮಾಹಿತಿ ತಿಳಿದ ಮಹಿಳಾ ಸಂರಕ್ಷಣಾ ವೇದಿಕೆ ಇಂದು ಹಿರಿಯ ನಾಗರೀಕರಾಗಿದ್ದ ನಿರ್ಮಲ ಅವರಿಗೆ ನ್ಯಾಯ ಕೊಡಿಸುವ ಉದ್ದೇಶದಿಂದ ಅವರ ಮಗಳಾದ ನೇತ್ರಾವತಿ ಅವರ ಮೇಲೆ ಠಾಣೆಯಲ್ಲಿ ದೂರು ನೀಡಲಾಯಿತು.  

ಆರೋಪಿ ಆಗಿರುವ ನೇತ್ರಾವತಿ ಅವರಿಗೆ ಸರಿಯಾದ ಶಿಕ್ಷೆ ಆಗಬೇಕು ಮತ್ತು ಹಿರಿಯ ನಾಗರಿಕರಾಗಿರುವ ನಿರ್ಮಲ ಅವರ ಯೋಗ ಕ್ಷೇಮ ತಿಳಿಸಬೇಕೆಂದು ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಚಿಂತಕಿ ಆಗಿರುವ ಶ್ರೀಮತಿ ರಮಿತಾ ಸೂರ್ಯವಂಶಿ ಮತ್ತು ಹಿಂದೂ ಜಾಗರಣ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ದೀಕ್ಷಿತ್ ಅವರು ಉಪಸ್ಥಿತರಿದ್ದರು.