ಉಡುಪಿ:ಭಾರತ ತಂಡದ ನಾಯಕಿ ಶಗುನ್ ಎಸ್. ವರ್ಮ ಹೆಗ್ಡೆ ಅವರಿಗೆ ಸಭಾಪತಿ ಹಾಗೂ ಸಭಾದ್ಯಕ್ಷರ ಕಚೇರಿಯಲ್ಲಿ ಸನ್ಮಾನ



ಉಡುಪಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭ ಭಾರತ U15 ಬಾಲಕಿಯರ ವಾಲಿಬಾಲ್ ತಂಡದ ನಾಯಕಿ ಶಗುನ್ ಎಸ್ ವರ್ಮ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. ಬಾಲಕಿಯ ಸಾಧನೆಯನ್ನು ಗುಣಗಾನ ಮಾಡಿದ ಸಭಾದ್ಯಕ್ಷ ಯು. ಟಿ ಖಾದರ್ ಅವರು, ಸಾಧನೆಗೆ ಅಭಿನಂದನೆ ಸಲ್ಲಿಸಿದರು.

ಸಾರ್ವಜನಿಕರಿಂದ ಕಿಕ್ಕಿರಿದು ತುಂಬಿದ್ದ ಕಲಾಪ ವೀಕ್ಷಣಾ ಗ್ಯಾಲರಿಯ ಮುಂಭಾಗದಲ್ಲಿ ಕುಳಿತಿದ್ದ ಶಗುನ್ ಎದ್ದು ನಿಂತು ಸಭಾದ್ಯಕ್ಷರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಂತೆ ಸಭೆಯಲ್ಲಿ ಉಪಸ್ಥಿತರಿದ್ದ ಸಚಿವರು ಹಾಗೂ ಶಾಸಕರು ಮೇಜು ತಟ್ಟಿ ಬಾಲಕಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದರು.

ಕಲಾಪದ ನಂತರ ಸಭಾದ್ಯಕ್ಷ  ಯು.ಟಿ ಖಾದರ್ ಅವರ ಕಚೇರಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ಕಚೇರಿಯಲ್ಲಿ ಶಗುನ್ ವರ್ಮ ಅವರಿಗೆ ಶಾಲು ಹೊದಿಸಿ ಗೌರವ ಸಲ್ಲಿಸಿ ಶುಭಾಶೀರ್ವಾದ ಮಾಡಿದರು.ಈ ಸಂದರ್ಭದಲ್ಲಿ ಹಿರಿಯ ಸಚಿವರಾದ ಬೋಸರಾಜ್ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್, ಕುಣಿಗಲ್ ಶಾಸಕ ರಂಗನಾಥ್, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಶುಭದರಾವ್, ಸಾಮಾಜಿಕ ಧುರೀಣ ಸುಗ್ಗಿ ಸುಧಾಕರ್ ಶೆಟ್ಟಿ, ಸಂದೇಶ್ ವರ್ಮ ತರಬೇತುದಾರ ಜೀವನ್ ಡಿಸಿಲ್ವಾ, ರಾಮ್ ಪ್ರಸಾದ್ ಮಾದಲಾದವರು ಉಪಸ್ಥಿತರಿದ್ದರು.