ಉಡುಪಿ:ಕೇರಳ ಮೂಲದ ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ


ಆಶಿಕ್ - ಅಲ್ತಫ್

ಉಡುಪಿ:ಕೇರಳ ಮೂಲದ ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.  ಆಶಿಕ್‌ ಅನ್ಸಾರ್‌ (19) ಮತ್ತು ಮಹಮ್ಮದ್‌  ಅಲ್ತಫ್‌ ( 23) ಬಂಧಿತರು.

ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ: 215/202025 ಕಲಂ 303(2) ಬಿಎನ್‌ ಎಸ್‌ ರಂತೆ ಪ್ರಕರಣ ದಾಖಲಾಗಿದೆ.

ಆರೋಪಿಗಳನ್ನು ಬಂಧಿಸಿರುವ ಉಡುಪಿ ಪೊಲೀಸರು ಅವರ  ಬಳಿ ಇದ್ದ ಕಳವು ಮಾಡಿದ ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಆಶಿಕ್‌ ಅನ್ಸಾರ್‌  ವಿರುದ್ಧ ಕೇರಳ ರಾಜ್ಯದಲ್ಲಿ 2 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ  1 ಮನೆಕಳ್ಳತನ ಪ್ರಕರಣ, ಇನ್ನೊಂದು ಗಾಂಜಾ ಸೇವನೆ ಪ್ರಕರಣವಾಗಿದೆ. ಮತ್ತೋರ್ವ ಆರೋಪಿ ಮಹಮ್ಮದ್‌  ಅಲ್ತಫ್‌  ವಿರುದ್ಧ ಕೇರಳ ರಾಜ್ಯದಲ್ಲಿ ಒಟ್ಟು 5 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ  3 ಕಳ್ಳತನ ಪ್ರಕರಣ  2 ಗಾಂಜಾಸೇವನೆ ಪ್ರಕರಣಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.