ರಾಮಂದಿರ ದೇಣಿಗೆ ಮತ್ತು ಕಾಣಿಕೆ ಹಣ ಕಳ್ಳತನ ಹಗರಣ- ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸಹಿತ ಮೂವರ ದಿಢೀರ್ ರಾಜೀನಾಮೆ

 


ಲಕ್ನೋ, ಜೂನ್ 26: ಅಯೋಧ್ಯೆ(Ayodhya)ಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಮತ್ತು ಕಾಣಿಕೆ ಹಣದ ಕಳ್ಳತನ ಹಗರಣವು ಈಗ ದೇಶದ ಅತ್ಯಂತ ದೊಡ್ಡ ರಾಜಕೀಯ ಬಿರುಗಾಳಿಯಾಗಿ ಮಾರ್ಪಟ್ಟಿದೆ. ರಾಮ ಮಂದಿರ ಟ್ರಸ್ಟ್‌ನ  ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ (PA) ಟಿನ್ನು ಯಾದವ್ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಟ್ರಸ್ಟ್‌ನ ಇಬ್ಬರು ಪ್ರಮುಖ ಉನ್ನತ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

ವಿಶೇಷ ತನಿಖಾ ತಂಡ (SIT) ನಡೆಸಿದ ತೀವ್ರ ಕಾರ್ಯಾಚರಣೆಯ ನಂತರ ಎಂಟು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿತ್ತು. ಈ ಬಂಧನದ ಬೆಳವಣಿಗೆಯಿಂದಾಗಿ ಟ್ರಸ್ಟ್‌ನ ಆಡಳಿತ ಮಂಡಳಿಯ ಮೇಲೆ ಭಾರಿ ಒತ್ತಡ ಉಂಟಾಗಿತ್ತು. ಇದರ ಬೆನ್ನಲ್ಲೇ. ಅವರೊಂದಿಗೆ ಟ್ರಸ್ಟ್‌ನ ಮತ್ತೊಬ್ಬ ಹಿರಿಯ ಹಾಗೂ ಪ್ರಮುಖ ಸದಸ್ಯರಾದ ಅನಿಲ್ ಮಿಶ್ರಾ ಕೂಡ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಹಗರಣದ ತೀವ್ರತೆ ಹಾಗೂ ರಾಜೀನಾಮೆಗೆ ಕಾರಣ ಬಂಧಿತ ಆರೋಪಿಗಳೆಲ್ಲರೂ ದೇವಸ್ಥಾನದ ಕಾಣಿಕೆ ಮತ್ತು ನಗದು ಹಣವನ್ನು ಎಣಿಕೆ ಮಾಡುವ ಪ್ರಕ್ರಿಯೆಯಲ್ಲಿದ್ದ ಸಿಬ್ಬಂದಿಯಾಗಿದ್ದರು. ಸ್ವತಃ ಚಂಪತ್ ರಾಯ್ ಅವರ ಅತ್ಯಂತ ಆಪ್ತ ಸಹಾಯಕನೇ ಸಿಸಿಟಿವಿ ಸಾಕ್ಷ್ಯಗಳ ಆಧಾರದ ಮೇಲೆ ಜೈಲು ಪಾಲಾಗಿರುವುದರಿಂದ, ಇಡೀ ಹಗರಣದ ನೈತಿಕ ಹೊಣೆ ಹೊತ್ತು ಅಥವಾ ತನಿಖೆಯ ತೀವ್ರತೆಗೆ ಹೆದರಿ ಈ ಇಬ್ಬರು ಪ್ರಮುಖರು ಟ್ರಸ್ಟ್‌ನಿಂದ ಹೊರನಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನವೇ ಈ ಹಗರಣ ಆಡಳಿತಾರೂಢ ಬಿಜೆಪಿ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ದೊಡ್ಡ ಹಿನ್ನಡೆಯನ್ನು ತಂದೊಡ್ಡಿದೆ.

ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಈ ಕಳ್ಳತನದ ವಿರುದ್ಧ ನಿರಂತರವಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದವು ಹಾಗೂ ಉನ್ನತ ಅಧಿಕಾರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿದ್ದವು.